alex Certify ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ, ಮಾನ್ವಿಗೆ ಬಿ.ವಿ. ನಾಯಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ, ಮಾನ್ವಿಗೆ ಬಿ.ವಿ. ನಾಯಕ್

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ ಮಾಡಿದೆ.

ಕೆ.ಎಸ್. ಈಶ್ವರಪ್ಪ ಅವರ ಕುಟುಂಬದವರ ಬದಲಿಗೆ ಆಪ್ತ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಸಂಸದ ಬಿ.ವಿ. ನಾಯಕ್ ಅವರಿಗೆ ಮಾನ್ವಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಕೊನೆಯವರೆಗೂ ಗೌಪ್ಯವಾಗಿ ಇಡಲಾಗಿತ್ತು. ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕೆ.ಇ. ಕಾಂತೇಶ್ ಸೇರಿದಂತೆ ಹಲವರ ಹೆಸರುಗಳು ಕೇಳಿ ಬಂದಿದ್ದವು. ಅಂತಿಮವಾಗಿ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...