alex Certify ಹೆಬ್ಬಾವಿನ ಮರಿ ಎಂದು ವಿಷದ ಹಾವು ಕೈಯ್ಯಲ್ಲಿಡಿದ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಬ್ಬಾವಿನ ಮರಿ ಎಂದು ವಿಷದ ಹಾವು ಕೈಯ್ಯಲ್ಲಿಡಿದ ವ್ಯಕ್ತಿ ಸಾವು

ಮಂಗಳೂರು: ಹೆಬ್ಬಾವಿನ ಮರಿ ಎಂದು ತಿಳಿದು ವಿಷದ ಹಾವಿನ ಮರಿ ಹಿಡಿದ ವ್ಯಕ್ತಿ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಬಜಪೆ ಬಳಿ ನಡೆದಿದೆ.

ಬಂಟ್ವಾಳದ ರಾಮಚಂದ್ರ ಪೂಜಾರಿ(58) ಮೃತಪಟ್ಟವರು. ಮನೆಯ ಮೆಟ್ಟಿಲು ಸಮೀಪ ಹಾವಿನ ಮರಿ ಕಂಡುಬಂದಿದ್ದು, ಕನ್ನಡಿ ಹಾವಿನ ಮರಿಯನ್ನು ಹೆಬ್ಬಾವಿನ ಮರಿ ಎಂದು ತಿಳಿದು ಬರಿಗೈಯಲ್ಲಿ ಹಿಡಿದಾಗ ಅವರ ಕೈಗೆ ಹಾವಿನ ಮರಿ ಕಚ್ಚಿದೆ. ಹೆಬ್ಬಾವಿನ ಮರಿ ಕಚ್ಚಿದೆ ಎಂದು ಚಿಕಿತ್ಸೆ ಪಡೆಯದೆ ನಿರ್ಲಕ್ಷ್ಯ ವಹಿಸಿದ್ದ ರಾಮಚಂದ್ರ ಪೂಜಾರಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...