
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರನದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕನಗರ ಸ್ಮಶಾನದಲ್ಲಿ ಕಾಳಿಕಾಂಬ ಗುಡಿ ಅರ್ಚಕರಿಗೆ ವಿಚಾರ ತಿಳಿಸದೇ ಇಬ್ಬರು ಆರೋಇಗಳು ಕುರಿಗಳನ್ನು ಬಲಿ ಕೊಟ್ಟು ವಾಮಾಚಾರ ಮಾಡಿದ್ದರು.
ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ ಮತ್ತು ಸುಮಾ ಆಚಾರ್ಯ ಹೆಸರಿನ ಚೀಟಿ ಕಾಳಿಕಾಂಬ ದೇವಿ ಕೊರಳಿಗೆ ಹಾಕಲಾಗಿತ್ತು. ಬಲಿ ನೀಡಿದ್ದ ಕುರಿಗಳ ರಕ್ತವನ್ನು ಸ್ನೇಹಮಯಿ, ಗಂಗರಾಜು ಫೋಟೋಗೆ ಅರ್ಪಣೆ ಮಾಡಲಾಗಿತ್ತು. ವಾಮಾಚಾರದ ದೃಶ್ಯ ಶ್ರೀರಾಮುಲು ಸೇನೆ ಮುಖಂಡ ಪ್ರಸಾದ್ ಅತ್ತಾವರ್ ಮೊಬೈಲ್ ನಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ್ ನನ್ನು ಪೊಲೀಸರು ಬಂಧಿಸಿದ್ದಾರೆ.