
ದಾವಣಗೆರೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅಭಿವೃದ್ಧಿಪಡಿಸಿರುವ ನೂತನ ತಂತ್ರಾಂಶವು ಪುನರಾರಂಭಿಸಲು ಸಾಧ್ಯವಾಗದ ಕಾರಣ ಮಂಡಳಿಯ ವಿವಿಧ ಸೌಲಭ್ಯಗಳ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಅವಧಿಯಲ್ಲಿ ಅರ್ಜಿ ಸಲ್ಲಿಕೆಯ ಕಾಲಮಿತಿ ಮುಕ್ತಾಯಗೊಳ್ಳುವ ಪ್ರಕರಣಗಳಿಗೆ ಮಾತ್ರ ಹೆಚ್ಚುವರಿ ಕಾಲಾವಕಾಶ ಕಲ್ಪಿಸಲಾಗಿದೆ. https://kbocwwb.karnataka .gov.in ಪೋರ್ಟಲ್ ನಲ್ಲಿ ಕ್ಷೇಮ್ ಅರ್ಜಿ ಸಲ್ಲಿಸಬಹುದೆಂದು ಸಹಾಯಕ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ.