alex Certify ಬೆಂಗಳೂರಲ್ಲಿ ನಿಗೂಢ ಶಬ್ದ, ಕಂಪನದ ಬಗ್ಗೆ ಆತಂಕದಲ್ಲಿದ್ದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ನಿಗೂಢ ಶಬ್ದ, ಕಂಪನದ ಬಗ್ಗೆ ಆತಂಕದಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್. ಅಶೋಕ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಇದು ಸಣ್ಣ ಪ್ರಮಾಣದ ಕಂಪನವಾಗಿದೆ. ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ರಾಜರಾಜೇಶ್ವರಿನಗರ ವ್ಯಾಪ್ತಿಯಲ್ಲಿ ಶಬ್ಧ ಮತ್ತು ಸಣ್ಣ ಪ್ರಮಾಣದ ಕಂಪನವಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ ತಜ್ಞರ ವರದಿ ಪಡೆದಿದ್ದು, ಇದು ಭೂಕಂಪದ ಮುನ್ಸೂಚನೆ ಅಲ್ಲವೆಂದು ತಿಳಿಸಿದ್ದಾರೆ. ನಾನು ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದು ಭೂಕಂಪದ ಮುನ್ಸೂಚನೆ ಅಲ್ಲವೆಂದು ಸಚಿವರು ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ 11.30 ರಿಂದ 12 ಗಂಟೆಯ ವೇಳೆಯಲ್ಲಿ ಭಾರೀ ಶಬ್ದ ಕೇಳಿ ಬಂದ ಕಾರಣ ಜನರಲ್ಲಿ ಆತಂಕ ಮೂಡಿತ್ತು. ಯಾರೂ ಭಯ ಪಡಬೇಡಿ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...