alex Certify ಬಿಜೆಪಿ ಶಾಸಕಿ ಪರ ಪ್ರಚಾರ: ಪೊಲೀಸರ ವಿರುದ್ದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕಿ ಪರ ಪ್ರಚಾರ: ಪೊಲೀಸರ ವಿರುದ್ದ ಕ್ರಮ

ಚಿತ್ರದುರ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ್ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಹಿರಿಯೂರು ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ, ಮೌನೇಶ್ವರ ಅವರು ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಬ್ಲಾಕ್ ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ ಚುನಾವಣಾಧಿಕಾರಿಗೆ ದೂರು ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಎಸ್.ಪಿ. ಪರಶುರಾಮ್ ನಾಲ್ವರನ್ನು ಹಿರಿಯೂರು ವಿಧಾನಸಭೆ ಕ್ಷೇತ್ರದ ಹೊರಗೆ ಇರುವ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...