alex Certify ಶಿಷ್ಟಾಚಾರ ಮರೆತ ಸ್ಪೀಕರ್ ಯು.ಟಿ. ಖಾದರ್: ಕಾಂಗ್ರೆಸ್ ವರಿಷ್ಠರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಷ್ಟಾಚಾರ ಮರೆತ ಸ್ಪೀಕರ್ ಯು.ಟಿ. ಖಾದರ್: ಕಾಂಗ್ರೆಸ್ ವರಿಷ್ಠರ ಭೇಟಿ

ಬೆಂಗಳೂರು: ಸಭಾಧ್ಯಕ್ಷರು ಮತ್ತು ಉಪ ಸಭಾಧ್ಯಕ್ಷರಾಗಿ ಆಯ್ಕೆಯಾದವರು ಪಕ್ಷದ ಚಟುವಟಿಕೆಯಿಂದ ದೂರ ಇರುತ್ತಾರೆ. ಆದರೆ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿರುವುದು ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಭಾಗವಹಿಸಲು ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ನಾಯಕರು ಆಗಮಿಸಿದ್ದಾರೆ.

ಅವರನ್ನು ಸ್ಪೀಕರ್ ಯು.ಟಿ. ಖಾದರ್ ಮತ್ತು ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಭೇಟಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಶಿಷ್ಟಾಚಾರ ಮರೆತು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ತಾಜ್ ವೆಸ್ಟ್ ಎಂಡ್ ನಲ್ಲಿ ತಂಗಿರುವ ಕಾಂಗ್ರೆಸ್ ನಾಯಕರನ್ನು ರಾಜ್ಯದ ಸಚಿವರಾದ ಜಿ. ಪರಮೇಶ್ವರ್, ಎಂ.ಬಿ. ಪಾಟೀಲ, ಹೆಚ್.ಕೆ. ಪಾಟೀಲ, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಮೊದಲಾದವರು ಭೇಟಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...