alex Certify BIG NEWS : ಸದನದಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಸ್ಪೀಕರ್ ಯು.ಟಿ ಖಾದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸದನದಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಸ್ಪೀಕರ್ ಯು.ಟಿ ಖಾದರ್

ಬೆಂಗಳೂರು : ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಯುಟಿ ಖಾದರ್ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದರು.

ನಿನ್ನೆ ಸದನಕ್ಕೆ ಬೇಗ ಬಂದ ಸದಸ್ಯರ ಹೆಸರು ಓದಿದ ಸ್ಪೀಕರ್ ಖಾದರ್. ಜೊತೆಗೆ ಸದನದಲ್ಲಿ ಆರಂಭದಿಂದ ಕೊನೆಯಲ್ಲಿದ್ದ ಶಾಸಕರ ಹೆಸರು ಓದಿದರು. ಈ ಮೂಲಕ ಸದನದಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದರು
ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕ ಮುನಿರತ್ನ, ಮುನಿರಾಜ್, ರವಿ ಸುಬ್ರಹ್ಮಣ್ಯಂ, ಧೀರಜ್, ಸಿಮೆಂಟ್ ಮಂಜು, ಡಾ.ಚಂದು ಲಮಾಣಿ, ಅಭಯ್ ಪ್ರಸಾದ್, ಎ ಮಂಜು, ಪಿ ರಘುಮೂರ್ತಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಡರಗಿ, ಬಿ.ನಾಗೇಂದ್ರ, ಅಶೋಕ್ ಪಟ್ಟಣ ಹಾಗೂ ರುದ್ರಪ್ಪ ಲಂಬಾಣಿ ಸೇರಿ ಹಲವರು ಶಾಸಕರ ಹೆಸರನ್ನು ಹೇಳಿ ಸ್ಪೀಕರ್ ಅಭಿನಂದನೆ ಸಲ್ಲಿಸಿದರು.

ಸದನದಲ್ಲಿ ಇಂದು ಗ್ಯಾರಂಟಿ ವಿಚಾರಗಳ ಕುರಿತು ಚರ್ಚೆ ನಡೆಯಿತು. ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ . ಕೇಂದ್ರದ ಅಕ್ಕಿ ಹೊರತುಪಡಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಎಂದ ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ. ಗ್ಯಾರಂಟಿ ಬದಲಿಗೆ ದೋಖಾ ನಡೆದಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ವಾಗ್ಧಾಳಿ ನಡೆಸಿದ್ದಾರೆ.
3 ಕೆಜಿ ಅಕ್ಕಿ, 2 ಕೆಜಿ ಜೋಳ ಅಥವಾ ರಾಗಿ ಕೊಡ್ತೀವಿ ಅಂತಿದ್ದಾರೆ. ಇದು ಅನ್ನಭಾಗ್ಯ ಅಲ್ಲ ಕನ್ನಭಾಗ್ಯ ಯೋಜನೆ. ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ಕೊಡಬೇಕಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಗ್ಯಾರಂಟಿ ವಿಚಾರ ಮುಂದಿಟ್ಟುಕೊಂಡು BJP ಸದಸ್ಯರು ಸದನದಲ್ಲಿ ಗದ್ದಲ ನಡೆಸಿದರು. ಮೋದಿಪ್ರತಿಯೊಬ್ಬರಿಗೂ 15 ಲಕ್ಷ ಹಾಕ್ತೀನಿ ಅಂತಾ ಹೇಳಿದ್ದರು. ಬ್ಯಾಂಕ್ ಖಾತೆ ಮಾಡಿಸಿದರು, ಎಲ್ಲಿ ಹಣ ಹಾಕಿದರು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಎನ್.ಹೆಚ್.ಕೋನರೆಡ್ಡಿ ಪ್ರಶ್ನೆ ಮಾಡಿದರು. ಈ ವೇಳೆ ಕೋನರೆಡ್ಡಿ ಮಾತಿಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...