alex Certify ಶೆಟ್ಟರ್, ಸವದಿ ಸೆಳೆದ ಕಾಂಗ್ರೆಸ್ ಗೆ ಬಿಜೆಪಿ ಶಾಕ್…? ಪ್ರಭಾವಿ ನಾಯಕ ಎಸ್.ಆರ್. ಪಾಟೀಲ್ ಕರೆ ತರಲು ಪ್ರಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೆಟ್ಟರ್, ಸವದಿ ಸೆಳೆದ ಕಾಂಗ್ರೆಸ್ ಗೆ ಬಿಜೆಪಿ ಶಾಕ್…? ಪ್ರಭಾವಿ ನಾಯಕ ಎಸ್.ಆರ್. ಪಾಟೀಲ್ ಕರೆ ತರಲು ಪ್ರಯತ್ನ

ಬೆಂಗಳೂರು: ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸೆಳೆದ ಕಾಂಗ್ರೆಸ್ ಗೆ ಶಾಕ್ ನೀಡಲು ಬಿಜೆಪಿ ಸಿದ್ಧತೆ ಕೈಗೊಂಡಿದೆ.

ಟಿಕೆಟ್ ದೊರಕದ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವ, ವಿಧಾನ ಪರಿಷತ್ ಮಾಜಿ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಅವರನ್ನು ಬಿಜೆಪಿಗೆ ಆಹ್ವಾನಿಸಲು ಪ್ರಯತ್ನ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮತ್ತು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಕ್ಷೇತ್ರದಿಂದ ಮಾಜಿ ಸಚಿವ ಎಸ್.ಆರ್. ಪಾಟೀಲ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಎರಡೂ ಕ್ಷೇತ್ರಗಳಲ್ಲಿ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರಿಂದ ಅಸಮಾಧಾನಗೊಂಡಿದ್ದ ಎಸ್.ಆರ್. ಪಾಟೀಲ್ ಅವರನ್ನು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಪ್ರಭಾವಿ ನಾಯಕನನ್ನು ಬಿಜೆಪಿಗೆ ಸೆಳೆದು ಕಾಂಗ್ರೆಸ್ ಗೆ ಶಾಕ್ ನೀಡಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದಾರೆ .

ಚಿವ ಮುರುಗೇಶ್ ನಿರಾಣಿ ಬಿಜೆಪಿ ಸೇರುವಂತೆ ಎಸ್.ಆರ್. ಪಾಟೀಲರನ್ನು ಆಹ್ವಾನಿಸಿದ್ದು, ಅವರು ಎರಡು ದಿನ ಸಮಯ ಕೇಳಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...