alex Certify ಮಾಜಿ ಸಿಎಂ HDK ವಿರುದ್ಧ ಏಕವಚನದಲ್ಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ HDK ವಿರುದ್ಧ ಏಕವಚನದಲ್ಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ವಾಗ್ದಾಳಿ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಶಾಸಕ ಎಸ್.ಆರ್. ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ಮೊನ್ನೆ ಗುಬ್ಬಿಯಲ್ಲಿ ನಡೆದ ಸಭೆ ನಮ್ಮ ಗಮನಕ್ಕೆ ಬಂದಿಲ್ಲ. ಕಾರ್ಯಕರ್ತರ ಗಮನಕ್ಕೆ ಕೂಡ ಬಂದಿಲ್ಲ. ಮರ್ಯಾದೆ ಇದ್ದರೆ ಸಭೆಗೆ ಹೋಗಬೇಡಿ ಎಂದು ಹೇಳಿದ್ದೆ. ನಾನು ನಾಲ್ಕು ಬಾರಿ ಶಾಸಕನಾದವನು. ನನ್ನನ್ನು ತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಚ್.ಡಿ.ಕೆ. ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರು ಸೋತ ವಿಚಾರಕ್ಕೆ ಸಂಬಂಧಿಸಿದಂತೆ ತಾಯಿಗೆ ದ್ರೋಹ ಮಾಡುವ ಕೆಲಸವನ್ನು ನಾನು ಮಾಡಿಲ್ಲ. ದೇವೇಗೌಡರು ಸೋಲಲು ನಾನು ಕಾರಣವಲ್ಲ. ನಾನು ಪ್ರಮಾಣ ಮಾಡುತ್ತೇನೆ. ನೀನು ಮಾಡುತ್ತೀಯಾ ಎಂದು ಕುಮಾರಸ್ವಾಮಿಗೆ ಎಸ್.ಆರ್. ಶ್ರೀನಿವಾಸ್ ಸವಾಲು ಹಾಕಿದ್ದಾರೆ.

ಇಲ್ಲಿಗೆ ಬಂದು ಮೊಸಳೆ ಕಣ್ಣೀರು ಹಾಕುತ್ತಾರೆ. ಗ್ಲಿಸರಿನ್ ಹಾಕಿಕೊಂಡು ಕಣ್ಣೀರು ಹಾಕುತ್ತಾರೆ. ಎಂಥಾ ಮನುಷ್ಯ ರೀ ನೀವು? ಇದಕ್ಕಿಂತ ದೊಡ್ಡ ಸಮಾರಂಭ ಮಾಡುತ್ತೇನೆ. ನಾನು ಸೀಮಂತ ಕಾರ್ಯಕ್ರಮಕ್ಕೆ ಹೋದಾಗ ನನ್ನನ್ನು ನೀವು ಯಾರು ಮಾತನಾಡಿಸಲಿಲ್ಲ. ಶಾಸಕ ಸಾ.ರಾ. ಮಹೇಶ್ ಅವರು ಹೇಳಿದರೂ ಕೂಡ ನನ್ನನ್ನು ಮಾತನಾಡಿಸಲಿಲ್ಲ ಎಂದು ಶ್ರೀನಿವಾಸ್ ದೂರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...