alex Certify ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ

ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ ಅವರನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಮಹಿಂದಾ ರಾಜಪಕ್ಸೆ ರಾಜೀನಾಮೆಯಿಂದ ಕೆರಳಿದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಅವರು ರಾಜಧಾನಿ ಕೊಲಂಬೊ ಬಳಿ ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸದರ ಈ ನಡೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ನಿಟ್ಟಂಪುರದಲ್ಲಿ ಅಮರಕೀರ್ತಿ ಅವರ ಕಾರ್ ತಡೆದು ನಿಲ್ಲಿಸಿದ್ದು, ಅವರ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶ್ರೀಲಂಕಾದಲ್ಲಿ ಆಡಳಿತ ಪಕ್ಷದ ಸಂಸದರೊಬ್ಬರನ್ನು ನಾಗರಿಕರು ಥಳಿಸಿ ಕೊಂದಿರುವ ಘಟನೆ ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...