alex Certify ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಗೆ ನಿರೀಕ್ಷಣಾ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಬಹುಕೋಟಿ ಮೊತ್ತದ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ ಪೂಜಾರ್ ಅವರಿಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರೀಕ್ಷಣಾ ಜಾಮೀನು ನೀಡಲಾಗಿದೆ.

ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಎಸ್ಐಟಿ ಫೆಬ್ರವರಿ 17ರಂದು ಕೇಸ್ ದಾಖಲಿಸಿ ಬಂಧಿಸಲು ಮುಂದಾಗಿದ್ದ ವೇಳೆ ಅಧಿಕಾರಿಗಳ ಮೇಲೆ ಕಾರ್ ಹತ್ತಿಸಲು ಯತ್ನಿಸಿ ಶ್ರೀಧರ್ ಪರಾರಿಯಾಗಿದ್ದರು. ನಂತರ ಅವರ ವಿರುದ್ಧ ವಿಧಾನಸೌಧ ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಶ್ರೀಧರ್ ಪೂಜಾರ್ ತೆರೆ ಮರೆಯಲ್ಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ಸಹಕರಿಸದೆ ತಲೆಮರೆಸಿಕೊಂಡಿದ್ದರಿಂದ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಲಾಗಿತ್ತು. ವಾರೆಂಟ್ ಪ್ರಶ್ನಿಸಿ ಶ್ರೀಧರ್ ಪೂಜಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಶ್ರೀಧರ್ ಪೂಜಾ ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸು ದಾಖಲಿಸಿದ್ದಾರೆ. ಒಂದೇ ಕೇಸ್ ಗೆ ಎರಡೆರಡು ಬಾರಿ ಎಫ್ಐಆರ್ ಮಾಡಿ ತನಿಖೆ ನಡೆಸಿದ್ದಾರೆ ಎಂದು ವಾದ ಮಂಡಿಸಿದ್ದಾರೆ. ಪೊಲೀಸರ ಕ್ರಮಕ್ಕೆ ನ್ಯಾಯಮೂರ್ತಿ ಎಂ.ಜಿ. ಉಮಾ ಅಸಮಾಧಾನ ವ್ಯಕ್ತಪಡಿಸಿದ್ದು, ಇಷ್ಟು ವರ್ಷವಾದರೂ ತನಿಖೆಯಲ್ಲಿ ಪ್ರಗತಿ ಏಕಿಲ್ಲ? ವಾಟ್ಸಾಪ್ ಚಾಟ್ ಆಧಾರದಲ್ಲಿ ಕ್ರಮ ಹೇಗೆ ಸಾಧ್ಯ? ಹಾಗಿದ್ದರೆ ಆಗಿನ ಆಯುಕ್ತರು, ಜಂಟಿ ಆಯುಕ್ತರು ಇತರರ ಮೇಲೆ ಯಾಕೆ ಕೇಸ್ ದಾಖಲಿಸಿಲ್ಲ ಎಂದು ಪೊಲೀಸರಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...