alex Certify ಸಾರಿಗೆ ಸಚಿವ ಶ್ರೀರಾಮುಲು ಹೆಸರಲ್ಲಿ ವಂಚನೆ, ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಸಚಿವ ಶ್ರೀರಾಮುಲು ಹೆಸರಲ್ಲಿ ವಂಚನೆ, ಅರೆಸ್ಟ್

ಬೆಂಗಳೂರು: ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ಅವರ ಹೆಸರಲ್ಲಿ ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರೀರಾಮುಲು ಅವರ ಮಾಜಿ ಆಪ್ತ, ಕೊಡಿಗೆಹಳ್ಳಿ ನಿವಾಸಿ ಧರ್ಮತೇಜ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಾರಿಗೆ ಸಚಿವ ಶ್ರೀರಾಮುಲು ಸಂಬಂಧಿ ಎಂದು ಹೇಳಿಕೊಂಡಿದ್ದ ಆರೋಪಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ. ಪ್ರದೀಪ್ ಎಂಬುವವರಿಂದ 5 ಲಕ್ಷ ರೂ. ಪಡೆದು ವಂಚಿಸಿದ್ದು, ಈ ಸಂಬಂಧ ಪ್ರದೀಪ್ ದೂರು ನೀಡಿದ್ದು, ಕೊಡಿಗೆಹಳ್ಳಿ ಠಾಣೆ ಪೊಲೀಸರು ಆರೋಪಿತಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...