alex Certify BIG NEWS : ಇಂದು ಸಂಜೆ ವಿಪಕ್ಷ ನಾಯಕನ ಹೆಸರು ಘೋಷಣೆ : ಎಸ್.ಟಿ ಸೋಮಶೇಖರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ಸಂಜೆ ವಿಪಕ್ಷ ನಾಯಕನ ಹೆಸರು ಘೋಷಣೆ : ಎಸ್.ಟಿ ಸೋಮಶೇಖರ್

ಬೆಂಗಳೂರು: ಇಂದು ಸಂಜೆ ವಿಪಕ್ಷ ನಾಯಕನ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಎಸ್ ಟಿ ಸೋಮಶೇಖರ್ ಬಿಜೆಪಿ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ದೆಹಲಿಯಲ್ಲಿ ವರಿಷ್ಟರು ಚರ್ಚೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಕೂಡ ದೆಹಲಿಗೆ
ಹೋಗಿದ್ದಾರೆ. ವಿಪಕ್ಷ ನಾಯಕನಾಗಿ ಯಾರನ್ನು ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ ಎಂದರು.
ಸಂಜೆ ಬಳಿಕ ಬಿಜೆಪಿಯ ವಿರೋಧ ಪಕ್ಷದ ನಾಯಕನ ಘೋಷಣೆಯಾಗಲಿದೆ ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಜುಲೈ 4 ರಂದು ಬಿಜೆಪಿ ಪ್ರತಿಭಟನೆ : ಮಾಜಿ ಸಿಎಂ BSY

ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಸಾವಿರಾರು ಕಾರ್ಯಕರ್ತರ ಜೊತೆ ಜುಲೈ 4 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ‘ಗ್ಯಾರಂಟಿ ಅನುಷ್ಠಾನ ಸಂಬಂಧ ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಸಾವಿರಾರು ಕಾರ್ಯಕರ್ತರ ಜೊತೆ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಪ್ರತಿಭಟನೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ದೆಹಲಿಗೆ ಬರಲು ಹೇಳಿದ್ದಾರೆ. ಯಾವ ವಿಚಾರಕ್ಕೆ ಎಂಬುದು ಗೊತ್ತಿಲ್ಲ. ದೆಹಲಿಗೆ ಹೋಗಿ ಬರುತ್ತೇನೆ. ನಾಡಿದ್ದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ವಿಧಾನಸೌಧದ ಮುಂದೆ ಇರುವ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ಮಾಡಲು ಬಿಜೆಪಿ ತೀರ್ಮಾನ ಮಾಡಿದ್ದು, ಬಿಜೆಪಿ ಮುಖಂಡರು, ಶಾಸಕರು ಬೆಳಗ್ಗೆಯಿಂದ ಸಂಜೆಯವರೆಗೆ ಕಾರ್ಯಕರ್ತರ ಜೊತೆ ಧರಣಿ ನಡೆಸಲಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...