alex Certify ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫೆ. 27ರ ಸಮ್ಮೇಳನದಲ್ಲಿ 7ನೇ ವೇತನ ಆಯೋಗ, ಉಚಿತ ಆರೋಗ್ಯ ಯೋಜನೆ ಜಾರಿ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫೆ. 27ರ ಸಮ್ಮೇಳನದಲ್ಲಿ 7ನೇ ವೇತನ ಆಯೋಗ, ಉಚಿತ ಆರೋಗ್ಯ ಯೋಜನೆ ಜಾರಿ ಘೋಷಣೆ ಸಾಧ್ಯತೆ

ದಾವಣಗೆರೆ: ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಾಸಮ್ಮೇಳನದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿಗಳು 7ನೇ ವೇತನ ಆಯೋಗ ವರದಿ ಅನುಷ್ಟಾನ, ಉಚಿತ ಆರೋಗ್ಯ ಯೋಜನೆ ಸೇರಿ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಮಹಾ ಸಮ್ಮೇಳನದಲ್ಲಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...