alex Certify BREAKING : ‘ದೇವಸ್ಥಾನಗಳ ಅನುದಾನ ಬಿಡುಗಡೆ’ ತಡೆ ಆದೇಶ ವಾಪಸ್ ಪಡೆದ ‘ರಾಜ್ಯ ಸರ್ಕಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ದೇವಸ್ಥಾನಗಳ ಅನುದಾನ ಬಿಡುಗಡೆ’ ತಡೆ ಆದೇಶ ವಾಪಸ್ ಪಡೆದ ‘ರಾಜ್ಯ ಸರ್ಕಾರ’

ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಆದೇಶ ವಾಪಸ್ ಪಡೆಯಲಾಗಿದೆ.

ಮುಜರಾಯಿ ಇಲಾಖೆ ದೇವಸ್ಥಾನಗಳ ಹಣ ತಡೆ ಹಿಡಿದಿರುವ ಆದೇಶವನ್ನು ಹಿಂಪಡೆಯುವಂತೆ ಆಯುಕ್ತರಿಗೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ. ಗೊಂದಲದಿಂದ ಆಯುಕ್ತರು ಹಣ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ. ಕೇವಲ ದೇವಸ್ಥಾನ ಗಳ ಜೀರ್ಣೋದ್ಧಾರ, ಕಾಮಗಾರಿಗಳ ವಿವರ ಪಡೆಯುವಂತೆ ಸಚಿವರು ಸೂಚಿಸಿದ್ದರು. ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತರು ಆದೇಶ ವಾಪಸ್ ಪಡೆದಿದ್ದಾರೆ ಎಂದರು.

ರಾಜ್ಯ ಸರ್ಕಾರವು 2022-23 ನೇ ಸಾಲಿನ ದೇವಸ್ಥಾನಗಳ ಜಿರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುದಾನ ಬಿಡುಗಡೆಗೆ ತಡೆ ಹಿಡಿಯುವಂತೆ ಆದೇಶ ಹೊರಡಿಸಿತ್ತು.ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ ಅನುದಾನ ಬಿಡುಗಡೆಗೆ ಮೂರು ನಿರ್ದೇಶನದ ಮೂಲಕ ಹಣ ಹಂಚಿಕೆ ಮಾಡದಂತೆ. ದೇವಸ್ಥಾನಗಳಿಗೆ ಹಣ ಬಿಡುಗಡೆಗೆ ತಡೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ ಸೂಚನೆ ನೀಡಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಮುಜರಾಯಿ ಇಲಾಖೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಗರಂ ಆಗಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸುತ್ತೇನೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.ಈ ಎಲ್ಲಾ ಬೆಳವಣಿಗೆಗಳ ನಂತರ ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಇಲಾಖೆ ಆಯುಕ್ತರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಇಲಾಖೆ ಆಯುಕ್ತರು ಆದೇಶ ವಾಪಸ್ ಪಡೆದಿದ್ದಾರೆ .

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...