ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟವಾಗಿ ಗಾಯಗೊಂಡಿದ್ದ ನೌಕರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಜುಲೈ 28ರಂದು ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟ ನಡೆದಿತ್ತು. ಗಾಯಗೊಂಡಿದ್ದ ನೌಕರ ಅಪ್ಪಾಜಿ ಎಂಬಾತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಘಟನೆ ಹಿನ್ನೆಲೆ ಮೃತ ನೌಕರನ ಕುಟುಂಬದವರು ಹಾಗೂ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.