alex Certify ಮೈಸೂರು – ಚೆನ್ನೈ ನಡುವೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ಮೇಲೆ ಮತ್ತೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು – ಚೆನ್ನೈ ನಡುವೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ಮೇಲೆ ಮತ್ತೆ ಕಲ್ಲು ತೂರಾಟ

ಮೈಸೂರು – ಚೆನ್ನೈ ನಡುವೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಲಾಗಿದೆ. ಕೃಷ್ಣರಾಜಪುರಂ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ಶನಿವಾರ ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಕಲ್ಲು ತೂರಾಟದಿಂದ ರೈಲಿನ C4 ಹಾಗೂ C5 ಕೋಚ್ ಕಿಟಕಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ. ಅಲ್ಪ ಪ್ರಮಾಣದಲ್ಲಿ ಹಾನಿಯಾದ ಕಾರಣ ರೈಲು ಪ್ರಯಾಣವನ್ನು ಮುಂದುವರಿಸಲಾಗಿದೆ.

ಈ ಹಿಂದೆಯೂ ಇದೆ ರೈಲಿನ ಮೇಲೆ ಬಂಗಾರಪೇಟೆ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳ ನಡುವೆ ಕಲ್ಲುತೂರಾಟ ನಡೆಸಲಾಗಿತ್ತು. ಚಲಿಸುವ ರೈಲಿಗೆ ಹಾನಿ ಮಾಡುವುದು ರೈಲ್ವೆ ಆಕ್ಟ್ ಸೆಕ್ಷನ್ 5ರ ಪ್ರಕಾರ ಜಾಮೀನು ರಹಿತ ಗಂಭೀರ ಅಪರಾಧವಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...