alex Certify ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; 3 ತಿಂಗಳಲ್ಲಿ ಮೂರನೇ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; 3 ತಿಂಗಳಲ್ಲಿ ಮೂರನೇ ಘಟನೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ತಿಂಗಳಲ್ಲಿ ಮೂರನೇ ಘಟನೆ ಇದಾಗಿದೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಏಪ್ರಿಲ್ 5 ರ ಬುಧವಾರದಂದು ಈ ಘಟನೆ ನಡೆದಿದ್ದು, ಕೆಲವು ಅಪರಿಚಿತ ದುಷ್ಕರ್ಮಿಗಳು ವಿಶಾಖಪಟ್ಟಣಂ-ಸಿಕಂದರಾಬಾದ್ ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ದಾರೆ. ಗಾಜಿನ ಕಿಟಕಿಯನ್ನು ಒಡೆದಿದ್ದು, ಈ ಕೃತ್ಯದಿಂದಾಗಿ ರೈಲು ನಾಲ್ಕು ಗಂಟೆಗಳ ಕಾಲ ವಿಳಂಬವಾಯಿತು.

ಬುಧವಾರ ವಿಶಾಖಪಟ್ಟಣದಿಂದ ಹೊರಡುವ ವಂದೇಭಾರತ್ ಎಕ್ಸ್‌ ಪ್ರೆಸ್ 05:45 ಗಂಟೆಗೆ ಹೊರಡುವ ಬದಲು 09:45 ಗಂಟೆಗೆ ಮರು ನಿಗದಿಪಡಿಸಲಾಗಿತ್ತು. ದುಷ್ಕರ್ಮಿಗಳ ಕಲ್ಲು ತೂರಾಟದಿಂದಾಗಿ ಸಿ -8 ಕೋಚ್ ಕಿಟಕಿ ಗಾಜು ಒಡೆದಿದೆ ಎಂದು ವಾಲ್ಟೇರ್ ಡಿವಿಷನ್ ರೈಲ್ವೆ ತಿಳಿಸಿದೆ. ವಿಶಾಖಪಟ್ಟಣಂ-ಸಿಕಂದರಾಬಾದ್ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆದಿರುವುದು ಇದು ಮೂರನೇ ಬಾರಿ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...