alex Certify ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಗಲಾಟೆ, ಹಲ್ಲೆ: 12 ಮಂದಿ ಅರೆಸ್ಟ್

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ರ್ಯಾಪಿಡೋ ಸವಾರ ವಿಜಯಕುಮಾರ್ ಮೇಲೆ ಹಲ್ಲೆ ಮಾಡಿದ್ದ ಪುನೀತ್, ಮಣಿ, ಶರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ಬೈಕ್ ಮಾಡಿದ್ದ ಆರೋಪಿಗಳು ಬಳಿಕ ಬೈಕ್ ಸವಾರ ವಿಜಯಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಸವಾರನ ಮುಖಕ್ಕೆ ಮೊಟ್ಟೆ ಒಡೆದು ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಬಂಧಿಸಲಾಗಿದೆ.

ಖಾಸಗಿ ಸಾರಿಗೆ ಒಕ್ಕೂಟದ ಪ್ರತಿಭಟನೆ ವೇಳೆ ಹಲವೆಡೆ ಗಲಾಟೆಗಳು ನಡೆದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧಡೆ 13 ಪ್ರಕರಣ ದಾಖಲಾಗಿದ್ದು, 12 ಜನರನ್ನು ಬಂಧಿಸಲಾಗಿದೆ.

ಕೇಂದ್ರ ವಿಭಾಗ 1, ಆಗ್ನೇಯ ವಿಭಾಗ 1, ಉತ್ತರ ವಿಭಾಗ ಹಾಗೂ ಈಶಾನ್ಯ ವಿಭಾಗ ತಲಾ 2, ಪಶ್ಚಿಮ ವಿಭಾಗದಲ್ಲಿ 7 ಕೇಸ್ ದಾಖಲಾಗಿವೆ. 13 ಕೇಸುಗಳಲ್ಲಿ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...