alex Certify ನಾಳೆಯಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆವು: ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆವು: ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್

ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ಕೈಗೊಂಡಿದ್ದ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. 3 ವಾರ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.

ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ಬ್ರೇಕ್ ಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್, ಇದೊಂದು ರಾಜಕೀಯ ಪಿತೂರಿ. ನಾಳೆಯಿಂದ ಮುಷ್ಕರಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೆವು. ಆದರೆ, ಯಾರೋ ಮಹಾನುಭಾವರು ಕೋರ್ಟ್ ಗೆ ಪಿಐಎಲ್ ಹಾಕಿದ್ದಾರೆ. ಮೂರು ವಾರ ಯಾವುದೇ ಮುಷ್ಕರ ನಡೆಸಿದಂತೆ ಹೈಕೋರ್ಟ್ ಸೂಚಿಸಿದೆ. ಪಿಐಎಲ್ ಹಾಕಿದ್ದ ಮಹಾನುಭಾವ ಸಾರಿಗೆ ನೌಕರರ ಸಮಸ್ಯೆ ತಿಳಿದುಕೊಳ್ಳಬೇಕಿತ್ತು. ಕೋರ್ಟ್ ಆದೇಶವನ್ನು ಪಾಲಿಸಿ ಮೂರು ವಾರಗಳ ಕಾಲ ಮುಷ್ಕರ ಮುಂದೂಡಿದ್ದೇವೆ ಎಂದರು.

ಮುಷ್ಕರ ಮುಂದೂಡಿದ ಬಗ್ಗೆ ಎಲ್ಲಾ ನೌಕರರಿಗೂ ಮಾಹಿತಿ ನೀಡಿದ್ದೇವೆ. ಕಳೆದ ಬಾರಿ ಹೋರಾಟ ಮಾಡುವಾಗಲೂ ಇದೇ ರೀತಿ ಆಗಿತ್ತು ಎಂದು ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...