alex Certify ಶಾಕಿಂಗ್​: ಆನ್​​​ಲೈನ್​ ಕ್ಲಾಸಿಗೆ ತೊಂದರೆಯಾಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್​: ಆನ್​​​ಲೈನ್​ ಕ್ಲಾಸಿಗೆ ತೊಂದರೆಯಾಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು…..!

ಕೊರೊನಾ ವೈರಸ್​ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳಿಗೆ ಆನ್​ಲೈನ್​​ ತರಗತಿಗಳೇ ಖಾಯಂ ಆಗಿವೆ. ಮನೆಯಲ್ಲೇ ಕೂತು ವಿದ್ಯಾರ್ಥಿಗಳು ಮೊಬೈಲ್​, ಕಂಪ್ಯೂಟರ್​ಗಳ ಸಹಾಯದಿಂದ ಆನ್​ಲೈನ್​ನಲ್ಲಿ ತರಗತಿಗಳಿಗೆ ಭಾಗಿಯಾಗುತ್ತಿದ್ದಾರೆ. ಇದೇ ರೀತಿ ಆನ್​ಲೈನ್​​ ತರಗತಿಯಲ್ಲಿದ್ದ ವಿದ್ಯಾರ್ಥಿಗೆ ಪೋಷಕರು ಡಿಸ್ಬರ್ಬ್​ ಮಾಡಿದ್ದಾರೆ ಎಂದು ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಶಾಕಿಂಗ್​ ಘಟನೆ ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ನಡೆದಿದೆ.

17 ವರ್ಷದ ಗುರುಚರಣ್​ ಉಡುಪ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು 2 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಗುರುಚರಣ್​ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಅಮ್ಮ ನನಗೆ ಡಿಸ್ಟರ್ಬ್​ ಮಾಡಬೇಡ ಎಂದು ರೂಮಿನೊಳಗೆ ತೆರಳಿದ್ದ ವಿದ್ಯಾರ್ಥಿ ಸೂಸೈಡ್​ ಮಾಡಿಕೊಂಡಿದ್ದಾನೆ.

ಈ ಸಂಬಂಧ ಪೋಷಕರು ವಾಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...