alex Certify ಗೃಹ ಸಚಿವ ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹ ಸಚಿವ ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಶಿವಪುರದ ಬನಸಿರಿ(20) ಆತ್ಮಹತ್ಯೆ ಮಾಡಿಕೊಂಡವರು. ಸಚಿವ ಪರಮೇಶ್ವರ್ ಒಡೆತನದ ಎಸ್ಎಸ್ಐಟಿನಲ್ಲಿ ದ್ವಿತೀಯ ವರ್ಷದ ಟೆಲಿಕಾಂ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಬನಸಿರಿ ಹಾಸ್ಟೆಲ್ ನಲ್ಲಿ ತಂಗಿದ್ದ ಕೋಣೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾರೆ.

ಗುರುವಾರ ಮಧ್ಯಾಹ್ನ ಕಾಲೇಜಿನಿಂದ ಹಿಂತಿರುಗಿದ ಅವರು ಊಟ ಮುಗಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ಗೊತ್ತಾಗಿಲ್ಲ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...