alex Certify ಸೌತ್‌ ಸಿನಿಮಾಗೆ ಬಾಲಿವುಡ್‌ ನಟರ ಅಸೂಯೆ ಹಿಂದಿನ ಕಾರಣ ಬಿಚ್ಚಿಟ್ಟ ರಾಮ್ ಗೋಪಾಲ್ ವರ್ಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೌತ್‌ ಸಿನಿಮಾಗೆ ಬಾಲಿವುಡ್‌ ನಟರ ಅಸೂಯೆ ಹಿಂದಿನ ಕಾರಣ ಬಿಚ್ಚಿಟ್ಟ ರಾಮ್ ಗೋಪಾಲ್ ವರ್ಮಾ

ಹಿಂದಿ ಭಾಷೆ ಕುರಿತು ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವಿಟ್ಟರ್ ನಲ್ಲಿ ವಾದ – ವಿವಾದಗಳು ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಹಲವಾರು ದಿಗ್ಗಜರು ಸುದೀಪ್ ಬೆಂಬಲಕ್ಕೆ ನಿಂತಿದ್ದಾರೆ.

ಸುದೀಪ್ ಗೆ ಸಂಪೂರ್ಣ ಬೆಂಬಲ ನೀಡಿರುವ ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿ, ಮೂಲ ನೆಲದ ಸತ್ಯಾಂಶವನ್ನು ಯಾರೂ ಅಲ್ಲಗಳೆಯುವಂತಿಲ್ಲ. ಉತ್ತರ ಭಾರತದ ನಟ-ನಟಿಯರಿಗೆ ದಕ್ಷಿಣ ಭಾರತದ ನಟ-ನಟಿಯರ ಬಗ್ಗೆ ಭಯ ಮತ್ತು ಅಸೂಯೆ ಕಾಡುತ್ತಿದೆ ಎಂದು ಹೇಳಿದ್ದಾರೆ.

ಇದಕ್ಕೆ ಕಾರಣ ಕನ್ನಡದಿಂದ ಡಬ್ ಆಗಿರುವ `ಕೆಜಿಎಫ್-2’ ಬಿಡುಗಡೆಯಾದ ಮೊದಲ ದಿನವೇ 50 ಕೋಟಿ ರೂಪಾಯಿಗಳಷ್ಟು ಗಳಿಕೆಯನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಹಿಂದಿ ಚಿತ್ರಗಳ ಆರಂಭವನ್ನು ನಾವೆಲ್ಲರೂ ನೋಡಲಿದ್ದೇವೆ ಎಂದು ಕಿಚಾಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...