alex Certify ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ನಿರ್ಮಾಪಕ ಎನ್.ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರ ವಿರುದ್ಧ ಎಂ.ಎನ್. ಕುಮಾರ್ ಮತ್ತು ಸುರೇಶ್ ಆರೋಪ ಮಾಡಿದ್ದರು. ಆರೋಪಗಳಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಸುದೀಪ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಸಮನ್ಸ್ ರದ್ದು ಕೋರಿ ಸುರೇಶ್ ಅರ್ಜಿ ಸಲ್ಲಿಸಿದ್ದರು. ಸುದೀಪ್ ಮಾನನಷ್ಟವಾಗಿದೆ ಎಂದು ಹೇಳಿದ್ದು, ವಿಚಾರಣಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿರುವುದು ಸೂಕ್ತವಾಗಿದೆ ಎಂದು ನ್ಯಾ. ಎಸ್. ವಿಶ್ವಜಿತ್ ಅವರಿದ್ದ ಹೈಕೋರ್ಟ್ ಪೀಠದಿಂದ ಅರ್ಜಿ ವಜಾಗೊಳಿಸಿ ಆದೇಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...