alex Certify ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ

ಬೆಳಗಾವಿ: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಯೊಬ್ಬರು ಸ್ವಂತ ಹಣದಿಂದ ಕೊಳೆವೆ ಬಾವಿ ಕೊರೆಸಿ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ. ಈ ಮಾದರಿ ಕಾರ್ಯದ ಮೂಲಕ ನಟನಿಗೆ ಹೆಮ್ಮೆ ತರುವ ಕೆಲಸ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ವಾಗವಾಡೆ ಗ್ರಾಮದ ಆದಿ ನಾಯಕ ಎಂಬ ಯುವಕ ಇಂತಹ ಸಾಮಾಜಿಕ ಕಾರ್ಯ ಮಾಡಿದ ಅಭಿಮಾನಿಯಾಗಿದ್ದಾರೆ. ಆದಿ ನಾಯಕ ಅವರು ಸುದೀಪ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ನೆಚ್ಚಿನ ನಟನ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ.

ಗ್ರಾಮದಲ್ಲಿನ ಕುಡಿಯುವ ನೀರಿನ ತೊಂದರೆ ನಿವಾರಿಸಲು ಸುದೀಪ್ ಜನ್ಮದಿನದಂದು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ನಂತರ ಕೇಕ್ ಕತ್ತರಿಸಿ ಶುಭಾಶಯ ಕೋರಿದ್ದಾರೆ. ಅವರ ಈ ಸಾಮಾಜಿಕ ಕಳಕಳಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣಗಳಲ್ಲಿಯೂ ಅಭಿನಂದನೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...