alex Certify BPL ಕಾರ್ಡ್ ದಾರರು, ಮಧ್ಯಮ ವರ್ಗದವರು ಸೇರಿ ಎಲ್ಲರಿಗೂ ಆರೋಗ್ಯ ಸೌಲಭ್ಯ: ಸಚಿವ ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ದಾರರು, ಮಧ್ಯಮ ವರ್ಗದವರು ಸೇರಿ ಎಲ್ಲರಿಗೂ ಆರೋಗ್ಯ ಸೌಲಭ್ಯ: ಸಚಿವ ಸುಧಾಕರ್

ಬೆಂಗಳೂರು: ದೇಶದಲ್ಲಿಯೇ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ ವಿಶಿಷ್ಟವಾಗಿದೆ. ಇದು ಸಮಗ್ರ ವಿಮಾ ಯೋಜನೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಚಿಂತಾಮಣಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಮತ್ತು ಬಡವರಿಗೆ ಮಾತ್ರ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ರಾಜ್ಯದಲ್ಲಿ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ದಾರರು, ಮಧ್ಯಮ ವರ್ಗದವರು, ಮೇಲ್ವರ್ಗ ಜನರಿಗೂ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. ಶೇಕಡ 30 ರಷ್ಟು ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಎಲ್ಲರಿಗೂ ವಿಮೆ, ಎಲ್ಲರಿಗೂ ಆರೋಗ್ಯ ಎನ್ನುವ ದೇಶದಲ್ಲೇ ವಿಶಿಷ್ಟ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೊಸ ವೈದ್ಯಕೀಯ ನೀತಿ ಜಾರಿಗೊಳಿಸಲಾಗಿದ್ದು, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆ ಮತ್ತಷ್ಟು ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...