alex Certify ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಡುಕಿನ ನಿರ್ಧಾರ: ಗೃಹಿಣಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಡುಕಿನ ನಿರ್ಧಾರ: ಗೃಹಿಣಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಹಾಕಿಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ ಲೇಔಟ್ ಜೈ ಮಾರುತಿ ನಗರದಲ್ಲಿ ಘಟನೆ ನಡೆದಿದೆ.

23 ವರ್ಷದ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮನೆಯಲ್ಲಿ ನೇಣು ಹಾಕಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 9 ದಿನಗಳ ಹಿಂದೆ ಜೈ ಮಾರುತಿ ನಗರಕ್ಕೆ ಬಂದು ಕುಟುಂಬದವರು ನೆಲೆಸಿದ್ದರು.

8 ವರ್ಷಗಳ ಹಿಂದೆ ಕಾವ್ಯಾ ಅವರು ವೆಂಕಟೇಶ್ ಜೊತೆಗೆ ಮದುವೆಯಾಗಿದ್ದರು. ವೆಂಕಟೇಶ್ -ಕಾವ್ಯಾ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮೂಲತಃ ಮೈಸೂರಿನ ವೆಂಕಟೇಶ್ ಬಂಡೆ ಕೆಲಸ ಮಾಡುತ್ತಿದ್ದರು. ಮನೆಗೆ ಮೂರು ದಿನಕ್ಕೊಮ್ಮೆ ಬರುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾವ್ಯಾ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...