alex Certify ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಯುವಕ ಸಾವು

ಬೆಂಗಳೂರು: ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದ ಸಮೀಪ ನಡೆದಿದೆ.

19 ವರ್ಷ ವಯಸ್ಸಿನ ಅಪರಿಚಿತ ಯುವಕ ಮರಕ್ಕೆ ತನ್ನ ಪಂಚೆಯಲ್ಲಿ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪಂಚೆ ಹರಿದು ನೆಲಕ್ಕೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಉಟ್ಟುಕೊಂಡಿದ್ದ ತನ್ನ ಪಂಚೆಯನ್ನು ಹರಿದು ಯುವಕ ಅದನ್ನೇ ನೇಣುಕುಣಿಕೆ ಮಾಡಿಕೊಂಡು ಕುಣಿಕೆಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪಂಚೆ ಹರಿದು ತುಂಡಾಗಿದ್ದು, ನೆಲಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...