alex Certify ಮನೆಯಲ್ಲೇ ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಬೆಳಗಾವಿ: ನೇಣು ಹಾಕಿಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಆಜಂ ನಗರದ ನಿವಾಸದಲ್ಲಿ ನಡೆದಿದೆ.

ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆಯವರ ಪತಿಯಾಗಿರುವ ಎಫ್.ಡಿ.ಎ. ಜಾಫರ್ ಫೀರ್ಜಾದೆ(39) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ರೇಷ್ಮಾ ಅವರು ಹಿಡಕಲ್ ಜಲಾಶಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದಾರೆ. ಜಾಫರ್ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...