alex Certify ಕೈಕೊಟ್ಟ ಪ್ರಿಯಕರನ ಮದುವೆ ದಿನವೇ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ; ತಾಳಿ ಕಟ್ಟಿದ ಕೂಡಲೇ ಪರಾರಿಯಾದ ಮದುಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೈಕೊಟ್ಟ ಪ್ರಿಯಕರನ ಮದುವೆ ದಿನವೇ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ; ತಾಳಿ ಕಟ್ಟಿದ ಕೂಡಲೇ ಪರಾರಿಯಾದ ಮದುಮಗ

 ಶಿವಮೊಗ್ಗ: ಪ್ರಿಯಕರ ಕೈಕೊಟ್ಟಿದ್ದರಿಂದ ಮನನೊಂದ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಒಟಿ ರಸ್ತೆ ನಿವಾಸಿ ರೂಪಶ್ರೀ ಭಾನುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಲವು ವರ್ಷಗಳಿಂದ ಮುರುಳಿ ಎಂಬುವರನ್ನು ರೂಪಶ್ರೀ ಪ್ರೀತಿಸಿದ್ದರು. ಶಿವಮೊಗ್ಗದಲ್ಲಿ ಭಾನುವಾರ ಮುರುಳಿ ಮದುವೆ ನಡೆದಿದ್ದು, ಮದುವೆ ದಿನವೇ ರೂಪಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಪ್ರೀತಿಸುತ್ತಿದ್ದೆವು. ಮದುವೆಯಾಗಲು ನಿರ್ಧರಿಸಿದ್ದೆವು. ಆದರೆ, ಆತ ಬೇರೆಯವರ ಜೊತೆ ಮದುವೆಯಾಗುತ್ತಿದ್ದಾನೆ ಎಂದು ಡೆತ್ ನೋಟ್  ಬರೆದಿಟ್ಟಿದ್ದಾರೆನ್ನಲಾಗಿದ್ದು, ದೊಡ್ಡಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ಮದುವೆಯಾದ ಮುರುಳಿ ತಾಳಿ ಕಟ್ಟಿದ ನಂತರ ರೂಪಶ್ರೀ ಆತ್ಮಹತ್ಯೆ ವಿಚಾರ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...