alex Certify ಮಗಳನ್ನು ಶಾಲೆಗೆ ಬಿಟ್ಟು ಕಚೇರಿಗೆ ಬಂದ ನೌಕರ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳನ್ನು ಶಾಲೆಗೆ ಬಿಟ್ಟು ಕಚೇರಿಗೆ ಬಂದ ನೌಕರ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರವಾರದ ಕೇಶವನಾಯ್ಕ ವಾಡ ನಿವಾಸಿ ಸತೀಶ್ ಪಾಂಡು ನಾಯ್ಕ(42) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಖಾದಿ ಮತ್ತು ಗ್ರಾಮೋದ್ಯೋಗ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸತೀಶ್ ಪಾಂಡುನಾಯ್ಕ ಕಾರ್ಯನಿರ್ವಹಿಸುತ್ತಿದ್ದರು.

ಶುಕ್ರವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಟ್ಟು ನೇರವಾಗಿ ಕಚೇರಿಗೆ ಬಂದ ಸತೀಶ್ ನಾಯ್ಕ್ ಕಚೇರಿಯ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...