alex Certify SHOCKING: ಮರ್ಮಾಂಗ ಕತ್ತರಿಸಿಕೊಂಡು ಜೀವ ಕಳೆದುಕೊಂಡ ವ್ಯಕ್ತಿ, ಕಾರಣ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮರ್ಮಾಂಗ ಕತ್ತರಿಸಿಕೊಂಡು ಜೀವ ಕಳೆದುಕೊಂಡ ವ್ಯಕ್ತಿ, ಕಾರಣ ಗೊತ್ತಾ…?

ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮರ್ಮಾಂಗ ಕತ್ತರಿಸಿಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಲು ನೋವಿನಿಂದ ಬಳಲುತ್ತಿದ್ದ ಕವಿತಾಳ ಸಮೀಪದ ಇರಕಲ್ ಗ್ರಾಮದ 52 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು. ಕಾಲು ನೋವಿನ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆ ಸಿಗದ ಕಾರಣ ನೋವು ಹೆಚ್ಚಾಗಿತ್ತು. ನೋವು ತಾಳಲಾರದೆ ಮರ್ಮಾಂಗ ಕತ್ತರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಕವಿತಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...