alex Certify ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಹೇಳಲಾಗಿದೆ. ಮಂಗಳೂರಿನ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಸರ್ಕಾರಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣವೇನೆಂಬುದು ಗೊತ್ತಾಗಿಲ್ಲ. ನಿತೇಶ್ ರಾವ್ ಅವರ ತಂದೆ ಐದು ವರ್ಷದ ಹಿಂದೆ ನಿಧನರಾಗಿದ್ದಾರೆ. ತಾಯಿ ಮತ್ತು ಸಹೋದರಿ ಇದ್ದಾರೆ ಎನ್ನಲಾಗಿದೆ. ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...