alex Certify ಸುಮಲತಾ ವಿರುದ್ಧ ಹೆಚ್​​ಡಿಕೆ ತಿರುಗಿಬಿದ್ದಿದ್ದರ ಹಿಂದಿನ ಕಾರಣ ಹೇಳಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಮಲತಾ ವಿರುದ್ಧ ಹೆಚ್​​ಡಿಕೆ ತಿರುಗಿಬಿದ್ದಿದ್ದರ ಹಿಂದಿನ ಕಾರಣ ಹೇಳಿದ ಸಿದ್ದರಾಮಯ್ಯ

ಕೆಆರ್​​ಎಸ್​​ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಅಂಬರೀಶ್ ಅವರ ಆರೋಪದ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಸಂಬಂಧ ಮಾತನಾಡಿದ ಅವ್ರು ಸುಮಲತಾ ಈ ರೀತಿಯ ಆರೋಪ ಮಾಡಿದ ಬಳಿಕ ಸರ್ಕಾರವಾಗಲಿ, ಗಣಿ ಇಲಾಖೆಯಾಗಲಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬೇಕಿತ್ತು ಎಂದು ಹೇಳಿದ್ದಾರೆ.

ಸುಮಲತಾ ಅಂಬರೀಶ್​ ನಿಖಿಲ್​ ಕುಮಾರಸ್ವಾಮಿಯನ್ನ ಚುನಾವಣಾಯಲ್ಲಿ ಸೋಲಿಸಿದ್ದಾರೆ ಎಂಬ ಕಾರಣಕ್ಕೆ ಕುಮಾರಸ್ವಾಮಿ ಈ ರೀತಿ ರಾಜಕೀಯ ಮಾಡ್ತಿದ್ದಾರೆ. ಸುಮಲತಾ ಕೆಆರ್​ಎಸ್​ ಸುತ್ತ ಮುತ್ತ 20 ಕಿಲೋಮೀಟರ್​ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್​ ನಾಯಕರ ಗಣಿ ಕಂಪನಿ ಇದೆ ಎಂತಲೂ ಸಂಸದೆ ಹೇಳಿದ್ದಾರೆ. ಆದರೆ ಈ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಕೂಡ ಭಾಗಿಯಾಗಿದೆ. ಇದೇ ಕಾರಣಕ್ಕೆ ಸರ್ಕಾರ ಧ್ವನಿ ಎತ್ತುತ್ತಿಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅದಕ್ಕೆ ನಾಚಿಕೆ, ಮಾನ ಮರ್ಯಾದೆ ಅನ್ನೋದು ಯಾವುದೂ ಇಲ್ಲ ಎಂದು ಹೇಳಿದ್ರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...