alex Certify BREAKING NEWS: ಮಂಡ್ಯದಿಂದ ಮಾತ್ರ ಸ್ಪರ್ಧೆ, ಇಲ್ಲದಿದ್ದರೆ ರಾಜಕೀಯವೇ ಬೇಡ: ಸಂಸದೆ ಸುಮಲತಾ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಂಡ್ಯದಿಂದ ಮಾತ್ರ ಸ್ಪರ್ಧೆ, ಇಲ್ಲದಿದ್ದರೆ ರಾಜಕೀಯವೇ ಬೇಡ: ಸಂಸದೆ ಸುಮಲತಾ ಘೋಷಣೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುವ ವಿಶ್ವಾಸವಿದೆ. ಜೆಡಿಎಸ್ ಗೆ ಬಿಟ್ಟು ಕೊಡುವ ಬಗ್ಗೆ ಅಧಿಕೃತವಾಗಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನನಗೆ ಟಿಕೆಟ್ ಕೊಡುವ ವಿಶ್ವಾಸವಿದೆ. ಮಂಡ್ಯ ಬಿಟ್ಟು ನನಗೆ ಬೇರೆ ಕಡೆ ಟಿಕೆಟ್ ನೀಡಿದರೆ ರಾಜಕೀಯವೇ ಬೇಡ. ನಾನು ರಾಜಕೀಯ ಕ್ಷೇತ್ರಕ್ಕೆ ಬಂದಿದ್ದೆ ಅಂಬರೀಶ್ ಹೆಸರು ಉಳಿಸಲು. ಹೀಗಾಗಿ ಮಂಡ್ಯದಲ್ಲಿ ಬಿಟ್ಟು ಬೇರೆ ಯಾವ ಕ್ಷೇತ್ರದಲ್ಲಿಯೂ ಸ್ಪರ್ಧಿಸುವುದಿಲ್ಲ. ಕ್ಷೇತ್ರದ ಹಾಲಿ ಸಂಸದರಿಗೆ ಆದ್ಯತೆ ನೀಡಲಿ ಎಂದು ಹೇಳಿದ್ದಾರೆ.

ಬಿಜೆಪಿಯವರು ನನಗೆ ಟಿಕೆಟ್ ನೀಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ಮಂಡ್ಯ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ ಎನ್ನುವ ಮಾಹಿತಿ ಇದೆ. ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಭೇಟಿಯಾದರೆ ಮಂಡ್ಯ ಕ್ಷೇತ್ರದ ಬಗ್ಗೆ ಮಾತ್ರ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಟಿಕೆಟ್ ಪಡೆಯಲು ನಾನು ಪ್ರಯತ್ನಪಟ್ಟಿಲ್ಲ. ಕಾಂಗ್ರೆಸ್ ನಲ್ಲೂ ಬೆಂಬಲಿಗರಿದ್ದಾರೆ. ಪಕ್ಷಕ್ಕೆ ಬನ್ನಿ ಎಂದು ಕರೆದಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ನಾಯಕರಿಂದ ನನಗೆ ಆಹ್ವಾನ ಬಂದಿರುವುದು ನಿಜ. ಬಿಜೆಪಿಗೆ ಬೆಂಬಲ ನೀಡಿದ್ದೇನೆ. ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿಲ್ಲ. ಬಿಜೆಪಿಯಿಂದ ನನಗೆ ಟಿಕೆಟ್ ಸಿಗದಿದ್ದರೆ ಮುಂದೆ ನೋಡೋಣ. ನನ್ನ ಕ್ಷೇತ್ರ ಮಂಡ್ಯ ಅಷ್ಟೇ ಎಂದು ಹೇಳಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...