alex Certify ‘ಕನ್ನಂಬಾಡಿ ಕಾಳಗ’ದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಂಸದೆ ಸುಮಲತಾ ಅಂಬರೀಶ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕನ್ನಂಬಾಡಿ ಕಾಳಗ’ದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಂಸದೆ ಸುಮಲತಾ ಅಂಬರೀಶ್​

ಕೆಆರ್​ಎಸ್​ ಡ್ಯಾಂನಲ್ಲಿ ಬಿರುಕು ಮೂಡಿದೆ ಎಂಬ ಸಂಸದೆ ಸುಮಲತಾ ಅಂಬರೀಶ್​ರ ಹೇಳಿಕೆ ಇದೀಗ ಸಾಕಷ್ಟು ರಾಜಕೀಯ ಸಂಘರ್ಷಗಳಿಗೆ ನಾಂದಿ ಹಾಡಿದೆ.

ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್​ ನಡುವೆ ಕನ್ನಂಬಾಡಿ ಕಾಳಗ ನಡೆಯುತ್ತಿರೋದರ ನಡುವೆಯೇ ಮಂಡ್ಯ ಗೌಡ್ತಿ ತಾವು ಈ ಕದನದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನಾನು ಮಾಡುತ್ತಿರುವ ಕೆಲಸಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ ಅಂದರೆ ನಾನು ಸರಿಯಾಗಿದ್ದೇನೆ ಎಂದೇ ಅರ್ಥ. ಕೆಆರ್​ಎಸ್​ ಡ್ಯಾಂ ವಿಚಾರದಲ್ಲಿ ನನ್ನ ತಪ್ಪಿಲ್ಲ. ಕೆಆರ್​ಎಸ್​ ಡ್ಯಾಂ ಸುರಕ್ಷತೆಯನ್ನ ಮರುಪರಿಶೀಲನೆ ಮಾಡಬೇಕು ಎಂದು ಹೇಳುವ ಮೂಲಕ ನಾನು ಸರಿಯಾದ ಕೆಲಸವನ್ನೇ ಮಾಡಿದ್ದೇನೆ. ಆದರೆ ಹೆಚ್​​ಡಿಕೆ ಮಾತ್ರ ಡಿಕ್ಟೇಟರ್​ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ನನ್ನ ವಿರುದ್ಧ ಮಾತನಾಡಲು ಹಲವರಿಗೆ ತರಬೇತಿಯನ್ನೂ ನೀಡುತ್ತಿದ್ದಾರೆ. ವೈಯಕ್ತಿಕವಾಗಿ ನನ್ನ ಮೇಲೆ ಮಾತಿನ ದಾಳಿ ನಡೆಸಿದ್ದಾರೆ. ನನಗೆ ಜನರ ಬೆಂಬಲ ಇದೆ. ಕೆಆರ್​ಎಸ್​ ಜಲಾಶಯದ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...