alex Certify ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್: ಈ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್: ಈ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ದೂರು

ಚಾಮರಾಜನಗರ: ಚಾಮರಾಜನಗರದ ಕಾಂಗ್ರೆಸ್ ಅಭ್ಯರ್ಥಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸುನಿಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದು, ಪ್ರಮಾಣ ಪತ್ರದಲ್ಲಿ ಪ್ರಮುಖ ಮಾಹಿತಿ ಮುಚ್ಚಿಟ್ಟ ಆರೋಪ ಕೇಳಿ ಬಂದಿದೆ. ಅವರ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾ ಅಧಿಕಾರಿಗೆ ಬಿಜೆಪಿಯಿಂದ ದೂರು ನೀಡಲಾಗಿದೆ.

ಸುನಿಲ್ ಬೋಸ್ ವೈವಾಹಿಕ ಜೀವನದ ಕುರಿತು ಮರೆ ಮಾಚಿರುವುದಾಗಿ ಆರೋಪಿಸಲಾಗಿದೆ. ನಾಮಪತ್ರದ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಪತ್ನಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿರುವ ಆರೋಪ ಕೇಳಿ ಬಂದಿದೆ. ಪ್ರಮಾಣ ಪತ್ರ ಅಸಿಂಧುಗೊಳಿಸುವಂತೆ ಬಿಜೆಪಿ ದೂರು ನೀಡಿದೆ. ಜಿಲ್ಲಾ ಚುನಾವಣಾ ಅಧಿಕಾರಿಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು, ಏಜೆಂಟ್ ನಾರಾಯಣ ಪ್ರಸಾದ್ ಹಾಗೂ ಪಕ್ಷದ ಪ್ರಮುಖರು ದೂರು ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...