alex Certify ಸೂರಜ್ ರೇವಣ್ಣ ಪರ ದೂರು ನೀಡಿದ್ದ ಆಪ್ತ ಶಿವಕುಮಾರ್ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂರಜ್ ರೇವಣ್ಣ ಪರ ದೂರು ನೀಡಿದ್ದ ಆಪ್ತ ಶಿವಕುಮಾರ್ ನಾಪತ್ತೆ

ಹಾಸನ: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸೂರಜ್ ನನ್ನು ಹಾಸನದ ಹೊಳೆನರಸೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬರುತ್ತಿದ್ದಂತೆಯೇ ದೂರು ನೀಡಿದ್ದ ಯುವಕನ ವಿರುದ್ಧವೇ ಪ್ರಕರಣ ದಾಖಲಿಸಿದ್ದ ಸೂರಜ್ ರೇವಣ್ಣ ಆಪ್ತ ಈಗ ನಾಪತ್ತೆಯಾಗಿದ್ದಾನೆ.

ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಅರಕಲಗೂಡು ಮೂಲದ ಯುವಕ ಎಸ್ ಪಿ, ಡಿವೈಎಸ್ ಪಿ, ಗೃಹ ಸಚಿವರಿಗೆ ದೂರು ನೀಡಿದ್ದ. ವಿಷಯ ಗೊತ್ತಾಗುತ್ತಿದ್ದಂತೆ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಸಂತ್ರಸ್ತ ಯುವಕನ ವಿರುದ್ಧ ಬೆದರಿಕೆ ಹಗೂ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ.

ಈಗ ಸೂರಜ್ ರೇವಣ್ಣ ಬಂಧನವಾಗುತ್ತಿದ್ದಂತೆ ಸೂರಜ್ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದಾನೆ. ದೂರು ನೀಡಿದ ನಂತರದಿಂದ ಶಿವಕುಮಾರ್ ಸಂಪರ್ಕಕ್ಕೆ ಸಿಗುತ್ತಿಲ್ಲ . ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಸೂರಜ್ ರೇವಣ್ಣ ಜೊತೆಗಿದ್ದೇ ಪಿತೂರಿ ನಡೆಸಿದ್ದನಾ? ಬೇರೆಯವರ ಜೊತೆ ಸೇರಿ ಸೂರಜ್ ನನ್ನು ಟ್ರ್ಯಾಪ್ ಮಾಡಿದ್ದನಾ? ಎಂಬ ಅನುಮಾನ ಮೂಡಿದೆ. ಶಿವಕುಮಾರ್ ಪತ್ತೆಗಾಗಿ ಪೊಲಿಸರು ಶೋಧ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: