alex Certify BREAKING NEWS: ಟ್ಯಾಂಕರ್ ನಿಂದ ಕೆಮಿಕಲ್ ಸೋರಿಕೆಯಾಗಿ 5 ಮಂದಿ ಸಾವು, 20 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಟ್ಯಾಂಕರ್ ನಿಂದ ಕೆಮಿಕಲ್ ಸೋರಿಕೆಯಾಗಿ 5 ಮಂದಿ ಸಾವು, 20 ಮಂದಿ ಗಂಭೀರ

ನವದೆಹಲಿ: ಗುರುವಾರ ನಸುಕಿನ ವೇಳೆ ಗುಜರಾತ್‌ ನ ಸೂರತ್‌ ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಟ್ಯಾಂಕರ್‌ ನಿಂದ ರಾಸಾಯನಿಕ ಸೋರಿಕೆಯಾದ ಘಟನೆಯಲ್ಲಿ ಕನಿಷ್ಠ 5 ಜನ ಸಾವನ್ನಪ್ಪಿದ್ದಾರೆ. 20 ಜನ ಗಾಯಗೊಂಡಿದ್ದಾರೆ. ಅಸ್ವಸ್ಥರನ್ನು ತಕ್ಷಣವೇ ಚಿಕಿತ್ಸೆಗಾಗಿ ಸೂರತ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು.

ಸೋರಿಕೆಯಾದ ಟ್ಯಾಂಕರ್‌ ಗೆ ಜೆರ್ರಿ ಕೆಮಿಕಲ್ ತುಂಬಿತ್ತು. ಸಚಿನ್ ಜಿಐಡಿಸಿ ಒಂದು ಕೈಗಾರಿಕಾ ಪ್ರದೇಶವಾಗಿದೆ. ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಟ್ಯಾಂಕರ್ ಚಾಲಕ ತ್ಯಾಜ್ಯವನ್ನು ಚರಂಡಿಗೆ ಸುರಿಯಲು ಮುಂದಾದಾಗ ಗಾಳಿಗೆ ರಾಸಾಯನಿಕ ಸ್ಪರ್ಶಿಸಿ ಅನಾಹುತ ಸಂಭವಿಸಿದೆ. ವಡೋದರಾದಿಂದ ಟ್ಯಾಂಕರ್ ಬಂದಿದ್ದು, ಚಾಲಕ ಸಚಿನ್ ಜಿಐಡಿಸಿ ಪ್ರದೇಶದ ಚರಂಡಿಗೆ ಅಕ್ರಮವಾಗಿ ರಾಸಾಯನಿಕ ತ್ಯಾಜ್ಯವನ್ನು ಸುರಿಯಲು ಪ್ರಯತ್ನಿಸಿದ್ದಾನೆ ಎಂದು ಹೇಳಲಾಗಿದೆ.

ಮೃತ ಕಾರ್ಮಿಕರು ಸಚಿನ್ ಜಿಐಡಿಸಿ ಪ್ರದೇಶದ ಸೀರೆ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಹತ್ತಿರದ ಅಂಗಡಿಯಲ್ಲಿ ಚಹಾ ಸೇವಿಸುತ್ತಿದ್ದಾಗ ರಾಸಾಯನಿಕ ಸೋರಿಕೆಯಾಗಿ ಅವರು ಸಾವನ್ನಪ್ಪಿದ್ದಾರೆ. ಗ್ಯಾಸ್ ಸೋರಿಕೆಯಾಗುತ್ತಿದ್ದಂತೆ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಟ್ಯಾಂಕರ್ ಚಾಲಕ ಮತ್ತು ಮಾಲೀಕರನ್ನು ಬಂಧಿಸಲು ತನಿಖೆ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...