alex Certify BIG NEWS: ಬೆಳಗಾವಿ ಬೈಎಲೆಕ್ಷನ್ ಘೋಷಣೆ, ಬಿಜೆಪಿ ಅಭ್ಯರ್ಥಿ ಬಗ್ಗೆ ಹೆಚ್ಚಿದ ಕುತೂಹಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಬೈಎಲೆಕ್ಷನ್ ಘೋಷಣೆ, ಬಿಜೆಪಿ ಅಭ್ಯರ್ಥಿ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.

ಬೆಳಗಾವಿಯಲ್ಲಿ ಕಳೆದ 4 ಚುನಾವಣೆಗಳಲ್ಲಿ ಜಯಭೇರಿ ಬಾರಿಸಿದ್ದ ಬಿಜೆಪಿ ಉಪ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಲಿದೆ ಎನ್ನುವುದು ಭಾರಿ ಕುತೂಹಲ ಮೂಡಿಸಿದೆ. ಈ ಕ್ಷೇತ್ರವನ್ನು ಸತತ 4 ಬಾರಿ ಪ್ರತಿನಿಧಿಸಿದ್ದ ಸುರೇಶ್ ಅಂಗಡಿ ಕೊರೋನಾ ಸೋಂಕಿನಿಂದ ಕಳೆದ ವರ್ಷ ನಿಧನರಾಗಿದ್ದರು.

ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಬೇಕೆಂಬ ಅಭಿಪ್ರಾಯ ಕೇಳಿ ಬಂದಿದೆ. ಮಾಜಿ ಸಂಸದರಾದ ಪ್ರಭಾಕರ ಕೋರೆ, ರಮೇಶ ಕತ್ತಿ ಸೇರಿದಂತೆ ಇನ್ನೂ ಹಲವರು ಆಕಾಂಕ್ಷಿಗಳಿದ್ದು, ಯಾರಿಗೆ ಟಿಕೆಟ್ ಎನ್ನುವುದು ಕುತೂಹಲ ಮೂಡಿಸಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದ ಬಿಜೆಪಿ ವರಿಷ್ಠರು ಈ  ಬಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಲಿದ್ದಾರೆ ಎನ್ನುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...