alex Certify ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ.

ಸೇಡಂ ತಾಲೂಕಿನ ಮುಧೋಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಸವರಾಜ ಮತ್ತು ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿ.ಆರ್.ಸಿ. ಶಂಕರಲಿಂಗಪ್ಪ ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಅಮಾನತುಗೊಳಿಸಿದ್ದಾರೆ. ಸಹಾಯಕ ಚುನಾವಣಾ ಅಧಿಕಾರಿಯ ಅನುಮತಿ ಪಡೆಯದೆ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಇವರನ್ನು ಸ್ಟ್ಯಾಟಿಕ್ ಸರ್ವೇಲೆನ್ಸ್ ಟೀಮ್ ತಂಡದಲ್ಲಿ ನಿಯೋಜಿಸಲಾಗಿತ್ತು. ಪೂರ್ವಾನುಮತಿ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...