alex Certify ಮಹಿಳೆ ಮೊಬೈಲ್ ಗೆ ಅಸಭ್ಯ ಮೆಸೇಜ್ ಕಳಿಸಿ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಮೊಬೈಲ್ ಗೆ ಅಸಭ್ಯ ಮೆಸೇಜ್ ಕಳಿಸಿ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಮಹಿಳೆಯ ಮೊಬೈಲ್ ಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಜಣ್ಣ ಅವರನ್ನು ಅಮಾನತು ಮಾಡಲಾಗಿದೆ.

ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಮಹಿಳೆ ಮೊಬೈಲ್ ಸಂಖ್ಯೆ ಪಡೆದು ಅಸಭ್ಯವಾಗಿ ಸಂದೇಶ ಕಳುಹಿಸಿದ್ದ ಆರೋಪ ಕೇಳಿ ಬಂದಿತ್ತು. ದೂರು ಕೊಡಲು ಬಂದ ಮಹಿಳೆಯ ನಂಬರ್ ಪಡೆದು ಆಗಾಗ ಮಹಿಳೆಯನ್ನು ಠಾಣೆಗೆ ಕರೆಸಿಕೊಂಡು ರೂಮ್ ಗೆ ಬರಲು ರಾಜಣ್ಣ ಹೇಳಿದ್ದರು. ಈ ಬಗ್ಗೆ ಸಾಕ್ಷಿ ಸಮೇತವಾಗಿ ಡಿಸಿಪಿ ಲಕ್ಷ್ಮಿ ಪ್ರಸಾದ್ ಅವರಿಗೆ ದೂರು ನೀಡಲಾಗಿತ್ತು. ಇಲಾಖಾ ತನಿಖೆಗೆ ಆದೇಶಿಸಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...