alex Certify ಜಿಲೆಟಿನ್ ಸ್ಪೋಟ ಪ್ರಕರಣ: ಸರ್ಕಾರದಿಂದ ಮಹತ್ವದ ನಿರ್ಧಾರ –ನಿರ್ಲಕ್ಷ್ಯ ತೋರಿದ ಪಿಎಸ್ಐ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲೆಟಿನ್ ಸ್ಪೋಟ ಪ್ರಕರಣ: ಸರ್ಕಾರದಿಂದ ಮಹತ್ವದ ನಿರ್ಧಾರ –ನಿರ್ಲಕ್ಷ್ಯ ತೋರಿದ ಪಿಎಸ್ಐ ಸಸ್ಪೆಂಡ್

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ಐ ಆರ್. ಗೋಪಾಲ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ.

ಗೃಹ ಇಲಾಖೆ ಅಮಾನತು ಆದೇಶ ಜಾರಿ ಮಾಡಿದೆ. ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ  ಮಾಡಲು ಪಿಎಸ್ಐ ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ. ಪ್ರಕರಣದ ತನಿಖೆ ನಡೆಸದೇ ಫೆ. 21 ಮತ್ತು 22 ರಂದು ರಜೆ ಮೇಲೆ ತೆರಳಿದ್ದ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಅರೋಪಿಗಳನ್ನು ದಸ್ತಗಿರಿ ಮಾಡದೇ ಇದ್ದಿದ್ದರಿಂದ ಈ ಸ್ಪೋಟ ಸಂಭವಿಸಿದೆ. ಆರೋಪಿ ನಾಗರಾಜ ಸೂಚನೆ ಮೇರೆಗೆ ಅಕ್ಕಿ ಚೀಲದಲ್ಲಿ ಸ್ಪೋಟಕ ಸಾಗಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಆರೋಪಿಗಳನ್ನು ಪತ್ತೆ ಮಾಡುವಂತೆ ಅಧೀನ ಸಿಬ್ಬಂದಿಗೂ ಸೂಚನೆ ನೀಡಿಲ್ಲ. ಆರೋಪಿಗಳನ್ನು ಸೂಕ್ತ ಸಂದರ್ಭದಲ್ಲಿ ದಸ್ತಗಿರಿ ಮಾಡಿದ್ದರೆ ಈ ಸ್ಫೋಟ ಪ್ರಕರಣ ಸಂಭವಿಸುತ್ತಿರಲಿಲ್ಲ. ಕರ್ತವ್ಯ ನಿರ್ವಹಣೆಯಲ್ಲಿ ಅತೀವ ನಿರ್ಲಕ್ಷ ಮತ್ತು ಬೇಜವಾಬ್ದಾರಿತನ ತೋರಿದ್ದಾರೆ ಎನ್ನಲಾಗಿದ್ದು, ಈ ಎಲ್ಲ ಕಾರಣಗಳಿಂದಾಗಿ ಗೋಪಾಲರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...