alex Certify ಆದಾಯಕ್ಕಿಂತ 216 ರಷ್ಟು ಅಧಿಕ ಆಸ್ತಿ ಗಳಿಸಿದ ಉಪ ವಿಭಾಗಾಧಿಕಾರಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯಕ್ಕಿಂತ 216 ರಷ್ಟು ಅಧಿಕ ಆಸ್ತಿ ಗಳಿಸಿದ ಉಪ ವಿಭಾಗಾಧಿಕಾರಿ ಸಸ್ಪೆಂಡ್

ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಎಸಿಬಿ ವರದಿ ಆಧರಿಸಿ ಸಿ. ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. 2022 ರ ಮಾರ್ಚ್ 16ರಂದು ಎಸಿಬಿ ಅಧಿಕಾರಿಗಳಿಂದ ಮಂಜುನಾಥ್ ಅವರ ಮನೆ, ಫಾರ್ಮ್ ಹೌಸ್, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ದಾಳಿಯ ವೇಳೆ ಅಕ್ರಮ ಆಸ್ತಿ ಸಂಬಂಧ ದಾಖಲೆ ದೊರೆತಿತ್ತು. ಆದಾಯಕ್ಕಿಂತ ಶೇಕಡ 216 ರಷ್ಟು ಅಧಿಕ ಅಕ್ರಮ ಆಸ್ತಿ ಬಗ್ಗೆ ವರದಿ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...