ಚೆನ್ನೈ : ತಮಿಳುನಾಡಿನಲ್ಲಿ ಭಾರೀ ಮಳೆಗೆ ಈವರೆಗೆ 10 ಜನರು ಸಾವನ್ನಪ್ಪಿದ್ದಾರೆ, ಜನಜೀವನ ಅಸ್ತವ್ಯಸ್ಥಗೊಂಡಿದೆ ಎಂದು ತಮಿಳುನಾಡು ಮುಖ್ಯ ಕಾರ್ಯದರ್ಶಿ ಶಿವ ದಾಸ್ ಮೀನಾ ತಿಳಿಸಿದ್ದಾರೆ.
ಮಳೆಯಿಂದಾಗಿ ತಿರುನೆಲ್ವೇಲಿ ಮತ್ತು ಟ್ಯುಟಿಕೋರಿನ್ ಜಿಲ್ಲೆಗಳಲ್ಲಿ ಹತ್ತು ಜನರು ಸಾವನ್ನಪ್ಪಿದ್ದಾರೆ. ಗೋಡೆ ಕುಸಿತದಿಂದಾಗಿ ಕೆಲವರು ಪ್ರಾಣ ಕಳೆದುಕೊಂಡರೆ, ಕೆಲವರು ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು.
ಮಳೆಯ ಬಗ್ಗೆ ಕೆಲವು ವಿವರಗಳನ್ನು ನೀಡಿದ ಅವರು, ದಕ್ಷಿಣದ ಜಿಲ್ಲೆಗಳು, ವಿಶೇಷವಾಗಿ ತಿರುನೆಲ್ವೇಲಿ ಮತ್ತು ಟ್ಯುಟಿಕೋರಿನ್ ದಾಖಲೆಯ ಮಳೆ ಮತ್ತು ಪ್ರವಾಹಕ್ಕೆ ಸಾಕ್ಷಿಯಾಗಿದೆ. ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಹೇಳಿದರು.
ಏತನ್ಮಧ್ಯೆ, ತಿರುನೆಲ್ವೇಲಿ ಜಿಲ್ಲಾಧಿಕಾರಿ ಕೆಪಿ ಕಾರ್ತಿಕೇಯನ್ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿವರಗಳನ್ನು ನೀಡಿದ್ದಾರೆ.