alex Certify ಮಾರಕಾಸ್ತ್ರಗಳೊಂದಿಗೆ ಬಂದ ಮುಸುಕುಧಾರಿ ದುಷ್ಕರ್ಮಿಗಳಿಂದ ಅಂಗಡಿ ಧ್ವಂಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರಕಾಸ್ತ್ರಗಳೊಂದಿಗೆ ಬಂದ ಮುಸುಕುಧಾರಿ ದುಷ್ಕರ್ಮಿಗಳಿಂದ ಅಂಗಡಿ ಧ್ವಂಸ

ಕಾಂಚೀಪುರಂ: ನೆರೆಯ ರಾಜ್ಯದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ವರು ಮುಸುಕುಧಾರಿ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಅಂಗಡಿ ಧ್ವಂಸಗೊಳಿಸಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಬುಧವಾರ ರಾತ್ರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಾಲ್ವರು ಮುಸುಕುಧಾರಿಗಳು ಮಾರಕಾಸ್ತ್ರಗಳೊಂದಿಗೆ ಅಂಗಡಿಯನ್ನು ಧ್ವಂಸಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವರದಿಗಳ ಪ್ರಕಾರ, ಇಲ್ಲಿ ಎರಡು ಗುಂಪುಗಳ ನಡುವೆ ಗ್ಯಾಂಗ್ ಪೈಪೋಟಿ ಇದೆ ಎನ್ನಲಾಗಿದೆ. ಆ ಪ್ರದೇಶದ ಅಂಗಡಿಗಳಿಂದ ಹಣ ವಸೂಲಿ ಮಾಡಲು ಉದ್ರಿಕ್ತ ಗುಂಪುಗಳೊಂದು ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಮಾರಕಾಸ್ತ್ರಗಳನ್ನು ಹಿಡಿದ ವ್ಯಕ್ತಿಗಳು ಅಂಗಡಿಯೊಳಗಿದ್ದ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಗೂಂಡಾಗಳ ಈ ಕೃತ್ಯದಿಂದ ಗ್ರಾಹಕರು ತಮ್ಮ ಜೀವಭಯದಿಂದ ಹೊರಗೆ ಓಡಿ ಹೋಗಿದ್ದಾರೆ. ಸದ್ಯ, ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...