alex Certify ವಿಧವೆ ಮದುವೆಯಾಗಲು ನಿರಾಕರಿಸಿದ ಪ್ರೇಮಿ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧವೆ ಮದುವೆಯಾಗಲು ನಿರಾಕರಿಸಿದ ಪ್ರೇಮಿ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕೊಯಮತ್ತೂರು: ತಮಿಳುನಾಡಿನ ತಿರುಪುರದ ಕೆವಿಆರ್‌ ನಗರದಲ್ಲಿ ವಿಧವೆ ಮನೆಯ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆಕೆಯ ಪ್ರೇಮಿ ವಿವಾಹವಾಗಲು ನಿರಾಕರಿಸಿದ ನಂತರ ಹೀಗೆ ಜೀವ ಕಳೆದುಕೊಂಡಿದ್ದಾಳೆ.

ಮೃತರನ್ನು ತಿರುನಲ್ವೇಲಿ ಮೂಲದ ದೈವನೈ(45) ಎಂದು ಗುರುತಿಸಲಾಗಿದೆ. ಅವರು ತಮ್ಮ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 15 ವರ್ಷಗಳ ಹಿಂದೆ ಅವರ ಪತಿ ತೀರಿಕೊಂಡಿದ್ದು, ಬನಿಯನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ದೈವನೈ ವಿವಾಹಿತ ಸಹೋದ್ಯೋಗಿಯೊಂದಿಗೆ ಸಂಬಂಧ ಬೆಳೆಸಿಕೊಂಡಳು.

ಆತನಿಗೆ ಮದುವೆಯಾಗುವಂತೆ ಕೇಳಿಕೊಂಡರೂ ಆತ ಸ್ಪಂದಿಸಿರಲಿಲ್ಲ. ಕೊನೆಗೆ ತಿರುಪುರ್ ದಕ್ಷಿಣದ ಮಹಿಳಾ ಪೊಲೀಸರನ್ನು ಸಂಪರ್ಕಿಸಿದ್ದಾಳೆ. ನಂತರ ಪೊಲೀಸರು ಇಬ್ಬರೊಂದಿಗೆ ಸಂವಾದ ನಡೆಸಿ ಜಗಳವಾಡದಂತೆ ಸಲಹೆ ನೀಡಿದ್ದಾರೆ.

ಆದರೂ ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ದೈವನೈ ಹತಾಶೆಯಿಂದ ಬಾಡಿಗೆ ಮನೆಯಿಂದ ಹೊರಬಂದು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ದೈವನೈಯ್ ತಾನೇ ಬೆಂಕಿ ಹಚ್ಚಿಕೊಳ್ಳುತ್ತಿರುವುದನ್ನು ತೋರಿಸುವ ದೃಶ್ಯವು ಸೈಬರ್‌ಸ್ಪೇಸ್‌ನಲ್ಲಿ ವೈರಲ್ ಆಗಿದೆ. ಮಾಹಿತಿ ಪಡೆದ ಪೊಲೀಸರು ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...