alex Certify BIG NEWS: ಮತ್ತೊಂದು ದುರಂತ; ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 10 ಜನರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ದುರಂತ; ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 10 ಜನರು ದುರ್ಮರಣ

ಚೆನ್ನೈ: ಬೆಂಗಳೂರಿನ ಅತ್ತಿಬೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಸಂಭವಿಸಿದ ಪಟಾಕಿ ಗೋಡೌನ್ ಬೆಂಕಿ ಅವಘಡದಲ್ಲಿ 14 ಜನರು ಸಜೀವ ದಹನಗೊಂಡಿರುವ ಘಟನೆ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಇಂತದ್ದೇ ದುರಂತ ಸಂಭವಿಸಿದೆ.

ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಾಲೂರಿನಲ್ಲಿ ಖಾಸಗಿ ಪಟಾಕಿ ತಯಾರಿಕಾ ಘಟಕ ಸ್ಫೋಟಗೊಂಡಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರ್ಮಿಕರು ಪಟಾಕಿ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಳಿಗ್ಗೆ 9:30ರ ಸುಮಾರಿಗೆ ಸ್ಫೋಟಗೊಂಡಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. 10 ಜನ ಕಾರ್ಮಿಕರು ಸಜೀವ ದಹನ ಹೊಂದಿದ್ದಾರೆ. ಇಬ್ಬರ ಮೃತದೇಹಗಳು ಮಾತ್ರ ಪತ್ತೆಯಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...