alex Certify BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸ್ಯಾಟಲೈಟ್ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಸ್ ಚಾಲಕ ಗುಣಶೇಖರನ್ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಸೆಪ್ಟೆಂಬರ್ 11ರ ಮಧ್ಯರಾತ್ರಿ ತಮಿಳುನಾಡಿನ ನಾಲ್ಕು ಸಾರಿಗೆ ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಾವೇರಿ ವಿವಾದಗಳ ನಡುವೆಯೇ ಇದೀಗ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...